7 ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
8 ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, ನಿನ್ನ ಸವಿಮಾತುಗಳು ವ್ಯರ್ಥ.
9 ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.
10 ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.
11 ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.
12 ಉಪದೇಶವನ್ನು ಮನಸ್ಸಿಗೆ ತೆಗೆದುಕೋ, ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು.
13 ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಟಿಗೆ ಸಾಯನು.
14 ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು.
15 ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು.