12“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
13ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.
14ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
15ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.