2ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವುದು, ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವುದು.
3ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ,
4ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ, ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ, ತಿಳಿವಳಿಕೆಯೇ ಉಪಕರಣ.
5ಜ್ಞಾನಿಗೆ ತ್ರಾಣ, ಬಲ್ಲವನಿಗೆ ಬಹು ಬಲ.
6ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು, ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು.
7ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.