21 ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು,
22 ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು.
23 ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.
24 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
25 ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ, ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
26 ದುಷ್ಟರಿಂದ ಸೋತ ಶಿಷ್ಟನು, ಹಾಳು ಬಾವಿ ಮತ್ತು ತುಳಿದಾಡಿದ ಒರತೆ.
27 ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ.