Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 28

ಜ್ಞಾನೋ 28:7-22

Help us?
Click on verse(s) to share them!
7ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.
8ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.
9ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.
10ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.
11ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.
12ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.
13ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
14ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.
15ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.
16ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.
17ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.
18ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.
19ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ.
20ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.
21ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.
22ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.

Read ಜ್ಞಾನೋ 28ಜ್ಞಾನೋ 28
Compare ಜ್ಞಾನೋ 28:7-22ಜ್ಞಾನೋ 28:7-22