7ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.
8ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಗ್ನಿಯನ್ನು ಆರಿಸುವರು.
9ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.
10ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು.
11ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.
12ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.
13ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.
14ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು.