Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 31

ಜ್ಞಾನೋ 31:7-22

Help us?
Click on verse(s) to share them!
7ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.
8ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.
9ಬಾಯನ್ನು ತೆರೆದು ನ್ಯಾಯವನ್ನು ತೀರಿಸು, ದೀನದರಿದ್ರರ ವ್ಯಾಜ್ಯ ಮಾಡು.
10ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
11ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು, ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು.
12ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ, ಹಿತವನ್ನೇ ಮಾಡುತ್ತಿರುವಳು.
13ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು, ಕೈಕೆಲಸವನ್ನು ಆಸಕ್ತಿಯಿಂದ ಮಾಡುವಳು.
14ವ್ಯಾಪಾರದ ಹಡಗುಗಳಂತೆ, ದೂರದಿಂದ ಬೇಕಾದ ಆಹಾರವನ್ನು ತರುವಳು.
15ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು, ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.
16ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.
17ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು.
18ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
19ರಾಟೆಯ ಮೇಲೆ ಕೈ ಹಾಕಿ, ಕದರನ್ನು ಹಿಡಿಯುವಳು.
20ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.
21ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.
22ತನಗಾಗಿ ರತ್ನಗಂಬಳಿಗಳನ್ನು ಮಾಡುವಳು, ಆಕೆಯ ಉಡುಪು ನಾರುಮಡಿ, ರಕ್ತಾಂಬರ.

Read ಜ್ಞಾನೋ 31ಜ್ಞಾನೋ 31
Compare ಜ್ಞಾನೋ 31:7-22ಜ್ಞಾನೋ 31:7-22