6ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
7ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.
8ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.