Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 10

ಪ್ರಸ 10:3-13

Help us?
Click on verse(s) to share them!
3ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.
4ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.
5ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.
6ಮೂಢರಿಗೆ ಮಹಾ ಪದವಿ ದೊರೆಯುವುದು. ಘನವಂತರೂ ಹೀನಸ್ಥಿತಿಯಲ್ಲಿರುವರು.
7ಆಳುಗಳು ಕುದುರೆ ಸವಾರಿ ಮಾಡುವುದನ್ನೂ, ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.
8ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆಯುವವನಿಗೆ, ಹಾವು ಕಚ್ಚುವುದು.
9ಯಾವನು ಕಲ್ಲುಗಳನ್ನು ಕೀಳುವನೋ ಅವನಿಗೆ ಹಾನಿ ಆಗುವುದು. ಮರವನ್ನು ಕಡೆಯುವವನಿಗೆ ಅಪಾಯವಿದೆ.
10ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.
11ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಯಾವ ಪ್ರಯೋಜನವೂ ಇಲ್ಲ.
12ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.
13ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.

Read ಪ್ರಸ 10ಪ್ರಸ 10
Compare ಪ್ರಸ 10:3-13ಪ್ರಸ 10:3-13