Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 10

ಪ್ರಸ 10:7-17

Help us?
Click on verse(s) to share them!
7ಆಳುಗಳು ಕುದುರೆ ಸವಾರಿ ಮಾಡುವುದನ್ನೂ, ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.
8ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆಯುವವನಿಗೆ, ಹಾವು ಕಚ್ಚುವುದು.
9ಯಾವನು ಕಲ್ಲುಗಳನ್ನು ಕೀಳುವನೋ ಅವನಿಗೆ ಹಾನಿ ಆಗುವುದು. ಮರವನ್ನು ಕಡೆಯುವವನಿಗೆ ಅಪಾಯವಿದೆ.
10ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.
11ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಯಾವ ಪ್ರಯೋಜನವೂ ಇಲ್ಲ.
12ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.
13ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.
14ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.
15ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ.
16ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!
17ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!

Read ಪ್ರಸ 10ಪ್ರಸ 10
Compare ಪ್ರಸ 10:7-17ಪ್ರಸ 10:7-17