Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 7

ಪ್ರಸ 7:12-20

Help us?
Click on verse(s) to share them!
12ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.
13ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು?
14ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.
15ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.
16ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?
17ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ?
18ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.
19ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.
20ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.

Read ಪ್ರಸ 7ಪ್ರಸ 7
Compare ಪ್ರಸ 7:12-20ಪ್ರಸ 7:12-20