11ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.
12ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.
13ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.
14ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು.
15ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.