Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 9

ಪ್ರಸ 9:1-9

Help us?
Click on verse(s) to share them!
1ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
2ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.
3ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.
4ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
5ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.
6ಅವರು ಸತ್ತಾಗಲೇ ಅವರ ಪ್ರೀತಿಯೂ, ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ. ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲು ಇಲ್ಲ.
7ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.
8ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.
9ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.

Read ಪ್ರಸ 9ಪ್ರಸ 9
Compare ಪ್ರಸ 9:1-9ಪ್ರಸ 9:1-9