Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 9

ಮಾರ್ಕ 9:28-31

Help us?
Click on verse(s) to share them!
28ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.
29ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು.
30ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
31ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.

Read ಮಾರ್ಕ 9ಮಾರ್ಕ 9
Compare ಮಾರ್ಕ 9:28-31ಮಾರ್ಕ 9:28-31