Text copied!
Bibles in Kannada

ಮಾರ್ಕ 9:28-36 in Kannada

Help us?

ಮಾರ್ಕ 9:28-36 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.
29 ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು.
30 ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
31 ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
32 ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.
33 ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
34 ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
35 ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
36 ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,
ಮಾರ್ಕ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019