Text copied!
Bibles in Kannada

ಯಾಜ 14:11-19 in Kannada

Help us?

ಯಾಜ 14:11-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
12 ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
13 ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.
14 ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
15 ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
16 ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.
17 ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
18 ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.
19 “ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.
ಯಾಜ 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019