Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 14

ಯಾಜ 14:8-22

Help us?
Click on verse(s) to share them!
8ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
9ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
10“ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.
11ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
12ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
13ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.
14ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
15ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
16ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.
17ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
18ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.
19“ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.
20ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.
21“ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.
22ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.

Read ಯಾಜ 14ಯಾಜ 14
Compare ಯಾಜ 14:8-22ಯಾಜ 14:8-22