Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 23

ಯಾಜ 23:13-23

Help us?
Click on verse(s) to share them!
13ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.
14ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.
15“‘ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.
16ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು.
17ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.
18ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು.
19ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು.
20ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.
21ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
22“‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.
23ಯೆಹೋವನು ಮೋಶೆಯೊಂದಿಗೆ ಮಾತನಾಡಿ,

Read ಯಾಜ 23ಯಾಜ 23
Compare ಯಾಜ 23:13-23ಯಾಜ 23:13-23