Text copied!
Bibles in Kannada

ಯಾಜ 23:22-30 in Kannada

Help us?

ಯಾಜ 23:22-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.
23 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
24 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.
25 ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು’” ಅಂದನು.
26 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
27 “ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.
28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.
29 ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
30 ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು.
ಯಾಜ 23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019