Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 4

ಯಾಜ 4:14-26

Help us?
Click on verse(s) to share them!
14ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.
15ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
16ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು,
17ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.
18ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
19ಅವನು ಹೋರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು.
20ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
21ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.
22“‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
23ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.
24ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
25ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
26ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

Read ಯಾಜ 4ಯಾಜ 4
Compare ಯಾಜ 4:14-26ಯಾಜ 4:14-26