14 ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
15 ಆನಂತರ ಅವನು ಹೊರಟು ಕಿರ್ಯತಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧ ಮಾಡಿದನು.
16 ಅವನು “ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು.
17 ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.
18 ಆಕೆಯು ತನ್ನ ತಂದೆಯ ಮನೆ ಸೇರಿದಾಗ, ತನ್ನ ತಂದೆಯ ಹತ್ತಿರ ಭೂಮಿಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು ಕಾಲೇಬನು, “ನಿನಗೇನು ಬೇಕು” ಎಂದು ಆಕೆಯನ್ನು ಕೇಳಲು
19 ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.
20 ಯೆಹೂದದ ಕುಲಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ವಿವರ:
21 ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,
22 ಕೀನಾ, ದೀಮೋನ್, ಅದಾದ್,
23 ಕೆದೆಷ್, ಹಾಚೋರ್, ಇತ್ನಾನ್,
24 ಜೀಫ್, ಟೆಲೆಮ್, ಬೆಯಾಲೋತ್,
25 ಹಾಚೋರ್ ಹದತ್ತಾ, ಹಾಚೋರ್ ಎಂಬ ಕಿರ್ಯೋತ್, ಹೆಚ್ರೋನ್, ಹಾಚೋರ್,