Text copied!
Bibles in Kannada

ಯೋಹಾ 19:27-36 in Kannada

Help us?

ಯೋಹಾ 19:27-36 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.
28 ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.
29 ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಸ್ಪಂಜನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು.
30 ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.
31 ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.
32 ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು.
33 ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.
34 ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.
35 ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.
36 ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.
ಯೋಹಾ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019