Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 3

ಯೋಹಾ 3:14-24

Help us?
Click on verse(s) to share them!
14ಇದಲ್ಲದೆಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.
15ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು.
16“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
17ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.
18ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
19ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
20ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
21ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”
22ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು.
23ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
24ಆಗ ಇನ್ನೂ ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ.

Read ಯೋಹಾ 3ಯೋಹಾ 3
Compare ಯೋಹಾ 3:14-24ಯೋಹಾ 3:14-24