45ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.
46ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.
47ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.
48ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.
49ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು