Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 4

ಯೋಹಾ 4:45-54

Help us?
Click on verse(s) to share them!
45ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.
46ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.
47ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.
48ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.
49ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು
50ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು.
51ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.
52ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು.
53ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.
54ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.

Read ಯೋಹಾ 4ಯೋಹಾ 4
Compare ಯೋಹಾ 4:45-54ಯೋಹಾ 4:45-54