28ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ,
29ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.
30“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.
31ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.
32ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
33ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.